ಕಂಬಳ ನೋಡಿ ಹಿಂದಿರುಗಿ ಬರುತ್ತಿದ್ದ ಕಾರು ಅಪಘಾತ: ಇಬ್ಬರ ಸಾವು- ಮೂವರು ಗಂಭೀರ

ಕುಣಿಗಲ್ : ಬೋರ್ ವೆಲ್ ಹಾಗೂ ಕಾರು ನಡುವೆ  ಭೀಕರ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ.

ಮಂಗಳೂರಿನ ಬಜಪೆಯ ಕಿಶಾನ್ ಶೆಟ್ಟಿ(20) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಮೃತ ಪಟ್ಟವರು ಎಂದು ತಿಳಿದುಬಂದಿದೆ. ನಿತೀಶ್ ಭಂಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ತಮ್ಮ ಊರಿಗೆ ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!