ಜಾರಕಿಹೊಳಿ ಸಿಡಿ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದ ಎಸ್ಐಟಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮತ್ತೊಂದು ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣ ಎಸ್ ಐಟಿ ಕೈಸೇರಿದ್ದು, ಪ್ರಕರಣವನ್ನು ಕೈಗೆತ್ತಿಕೊಂಡ ಮೊದಲ ದಿನವೇ ಎಸ್‍ಐಟಿ ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.  

ಸೌಮೇಂದ್ರ ಮುಖರ್ಜಿ ನೇತೃತ್ವದ ಎಸ್ ಐ ಟಿ ತಂಡ ಇಂದಿನಿಂದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಮೊದಲ ದಿನವೇ ದಿನೇಶ್ ಕಲ್ಲಹಳ್ಳಿಗೆ ಸಿಡಿ ಕೊಟ್ಟಂತ ವ್ಯಕ್ತಿ ಹಾಗೂ ಆತನ ಜೊತೆಗಿದ್ದಂತ ಯುವತಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಎಸ್ ಐಟಿ ತನಿಖೆಗೆ ಆದೇಶಿತ್ತು. ತನಿಖೆಯ ನೇತೃತ್ವವವನ್ನು ಸೌಮೇಂದ್ರ ಮುಖರ್ಜಿ ನೇತೃತ್ವದ ತಂಡಕ್ಕೆ ವಹಿಸಿತ್ತು. ಇಂದಿನಿಂದ ತನಿಖೆ ಆರಂಭಿಸಿರುವಂತ ಎಸ್ ಐಟಿ ಅಧಿಕಾರಿಗಳು, ಮೊದಲ ದಿನವೇ ದಿನೇಶ್ ಕಲ್ಲಹಳ್ಳಿಗೆ ಸಿಡಿ ನೀಡಿದಂತ ಯಶವಂತಪುರದಲ್ಲಿದ್ದಂತ ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ. ಅಲ್ಲದೇ ಆತನ ಜೊತೆಗಿದ್ದಂತ ಯುವತಿಯನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. 

Leave a Reply

Your email address will not be published. Required fields are marked *

error: Content is protected !!