ಪರ್ಕಳ ನಾರಾಯಣಗುರು ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರ

ಉಡುಪಿ – ಬ್ರಹ್ಮಶ್ರೀ ನಾರಾಯಣಗುರುಗಳ 165 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಸೆ. 13 ರಂದು ಜರಗಿದ ಸಮಾರಂಭದಲ್ಲಿ ಸಮಾಜದ ವಿವಿಧ ಪದವಿಗಳಲ್ಲಿ 90% ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಬಹುಮಾನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಅಧ್ಯಕ್ಷ ಎಂ. ನಂದಕುಮಾರ್, ಗೌರವ ಅಧ್ಯಕ್ಷ ಯು. ಶ್ರೀಧರ್, ಸ್ಥಾಪಕಾಧ್ಯಕ್ಷ ಸದಾನಂದ ಪರ್ಕಳ, ಅತಿಥಿ ಅಡ್ವೆ ರವೀಂದ್ರ ಪೂಜಾರಿ, ಪ್ರ. ಕಾರ್ಯದರ್ಶಿ ರಾಜೇಶ ಅಮೀನ್, ಮಹಿಳಾ ಘಟಕದ ಅಧ್ಯಕ್ಷೆ ದೇವಕಿ ಕೋಟ್ಯಾನ್, ಕಾರ್ಯದರ್ಶಿ ಸಂಧ್ಯಾ ರಮೇಶ್ ಸುವರ್ಣ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!