ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಹಾಗೂ ಪ್ರೀ ಪೇಡ್ ವಿದ್ಯುತ್ ಮೀಟರ್ ಅಳವಡಿಕೆ : ಸುನೀಲ್ ಕುಮಾರ್

ಬೆಂಗಳೂರು ಸೆ.22 : ರಾಜ್ಯದಲ್ಲಿ ಮೂರು ಹಂತದಲ್ಲಿ ಸ್ಮಾರ್ಟ್ ಹಾಗೂ ಪ್ರೀ ಪೇಡ್ ವಿದ್ಯುತ್ ಮೀಟರ್ ಅಳವಡಿಕೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.

ಸೆ.20 ರಂದು ಸದನದಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೂರು ಹಂತಗಳಲ್ಲಿ ಸ್ಮಾರ್ಟ್ ಹಾಗೂ ಪ್ರೀ ಪೇಡ್ ವಿದ್ಯುತ್ ಮೀಟರ್ ಅಳವಡಿಕೆ ಸಲುವಾಗಿ, ಮೊದಲ ಹಂತದಲ್ಲಿ ಸರ್ಕಾರಿ ಕಚೇರಿಗಳಿಗೆ, ಎರಡನೇ ಹಂತದಲ್ಲಿ ಹೊಸ ಕಟ್ಟಡ ನಿರ್ಮಾಣದ ವೇಳೆಯಲ್ಲಿ ಸಂಪರ್ಕ ಪಡೆದುಕೊಳ್ಳುವವರಿಗೆ, ಮೂರನೆ ಹಂತದಲ್ಲಿ 27 ಅಮೃತ ಸಿಟಿಗಳಿಗೆ ಈ ಯೋಜನೆಯನ್ನು ಅಳವಡಿಕೆ ಮಾಡಲಾಗುವುದು. ಆದರೆ ಯಾವುದೇ ಕಾರಣಕ್ಕೂ ಸ್ಮಾರ್ಟ್ ಮೀಟರ್, ಪ್ರೀಪೇಡ್ ಮೀಟರ್ ಗಳನ್ನು ಕೃಷಿ ಪಂಪ್ ಸೆಟ್ ಗಳಿಗೆ ಅಳವಡಿಕೆ ಮಾಡಲಾಗುವುದಿಲ್ಲ ಎಂದು ಅಶ್ವಾಸನೆ ನೀಡಿದರು.

ಇದೇ ವೇಳೆ ಮಾತು ಮುಂದುವರೆಸಿದ ಅವರು, ಟ್ರಾನ್ಸ್ ಫಾರ್ಮರ್ ಸುಟ್ಟು ಹೋದ ಪಕ್ಷದಲ್ಲಿ 24 ಗಂಟೆಯಲ್ಲಿ ಬದಲಾಯಿಸಿಕೊಡಲು ಸರಕಾರದಿಂದ ಅಗತ್ಯ ಕ್ರಮ ಕೈಗೊಳ್ಳಾಗುವುದು ಎಂದು ಭರವಸೆ ನೀಡಿದರು.

Leave a Reply

Your email address will not be published. Required fields are marked *

error: Content is protected !!