ಬೆಳ್ಮಣ್: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳ ಬ್ಯಾಟರಿ ಕದ್ದ ಖದೀಮರು

ಬೆಳ್ಮಣ್, (ಉಡುಪಿ ಟೈಮ್ಸ್ ವರದಿ) ಅ. 21 : ಕಾರ್ಕಳ ತಾಲೂಕಿನ ಬೆಳ್ಮಣ್ ನಲ್ಲಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಟಿಪ್ಪರ್, ಲಾರಿಗಳ ಬ್ಯಾಟರಿಗಳನ್ನು ಕಳ್ಳರು ಕಳವು ಗೈದು ಪರಾರಿಯಾಗಿದ್ದಾರೆ.

ಈ ಬಗ್ಗೆ ಲಾರಿ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದು, ತಡರಾತ್ರಿ ಬೆಳ್ಮಣ್ ಚರ್ಚ್ ಬಳಿಯಲ್ಲಿ ನಿಲ್ಲಿಸಿದ್ದ ಸುಮಾರು ಹತ್ತುಕ್ಕೂ ಹೆಚ್ಚು ಲಾರಿ ಹಾಗೂ ಟಿಪ್ಪರ್ ಗಳ ಬ್ಯಾಟರಿಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಕೆಲವೊಂದು ಲಾರಿಗಳ ಬ್ಯಾಟರಿ ಕಳವಾಗಿತ್ತು. ಇದೀಗ ಮತ್ತೆ ಹತ್ತಕ್ಕೂ ಹೆಚ್ಚಿನ ಲಾರಿಗಳ ಬ್ಯಾಟರಿಯನ್ನು ಕಳ್ಳರು ಕದ್ದಿದ್ದಾರೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!