ಬೀದಿನಾಯಿಗೆ ಗುಂಡು ಹಾರಿಸಿ ಹತ್ಯೆ, ಬುದ್ದಿವಂತರ ಜಿಲ್ಲೆಯಲ್ಲಿ ಮತ್ತೆ ಅಮಾನವೀಯ ಘಟನೆ
ಮಂಗಳೂರು(ಉಡುಪಿ ಟೈಮ್ಸ್ ವರದಿ): ಬೀದಿನಾಯಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಯೊಂದು ದ.ಕ ಜಿಲ್ಲೆಯ ಮಂಗಳೂರಿನ ಶಿವಭಾಗ್ ಸಮೀಪದ ಜ್ಯುವೆಲ್ಲರ್ಸ್ ಮಳಿಗೆಯೊಂದರ ಹಿಂಭಾಗದಲ್ಲಿ ಜು.8ರ ತಡರಾತ್ರಿ ನಡೆದಿದೆ.
ಘಟನೆಯ ನಂತರ ಸ್ಥಳಕ್ಕೆ ತೆರಳಿದ್ದ ಅನಿಮಲ್ ಕೇರ್ ಟ್ರಸ್ಟ್ ಕಾರ್ಯಕರ್ತರು ನಾಯಿಯನ್ನು ಆ್ಯಂಬುಲೆನ್ಸ್ ಮೂಲಕ ನಗರದ ಜೈಲು ರಸ್ತೆಯ ಪಶು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ನಾಯಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನಾಯಿಯ ದೇಹದಲ್ಲಿ ಬುಲೆಟ್ ಲಭಿಸಿದೆ ಎಂದು ಹೇಳಿದ್ದಾರೆ.
ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಮಾ ರಮೇಶ್, ಇದೊಂದು ಅಮಾನವೀಯ ಕೃತ್ಯ. ಈ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಗುಂಡು ಹಾರಿಸಿದ ವ್ಯಕ್ತಿಯನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.
ಇದೀಗ ಘಟನೆ ಸ್ಥಳೀಯ ರನ್ನು ಆತಂಕಕ್ಕೀಡುಮಾಡಿದ್ದು, ಈ ಕುರಿತಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ ಕೃತ್ಯವನ್ನು ಖಂಡಿಸಿರುವ ಪ್ರಾಣಿ ಪ್ರಿಯರು ಇಂತಹ ಅಮಾನವೀಯ ಕೃತ್ಯ ಎಸಗಿರುವ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅನಿಮಲ್ ಕೇರ್ ಟ್ರಸ್ಟ್ನ ಮುಖ್ಯಸ್ಥೆ ಸುಮಾ ಅವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ ಎಂದು ಬಂದಿದೆ