ವಿಕಲಚೇತನನ ಸಾಧನೆಗೊಲಿದ ರಾಜ್ಯ ಪ್ರಶಸ್ತಿ

ಉಡುಪಿ ಡಿ.5 (ಉಡುಪಿ ಟೈಮ್ಸ್ ವರದಿ) : ವಿಕಲಚೇತನ ಕ್ಷೇತ್ರದಲ್ಲಿನ ವೈಯಕ್ತಿಕ ಸಾಧನೆಗಾಗಿ ರಾಜಶೇಖರ್ ಪಿ. ಶಾಮರಾವ್ ರವರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಡಿ.3 ರಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ 2022 ಕಾರ್ಯಕ್ರಮದಲ್ಲಿ ರಾಜಶೇಖರ್ ಪಿ. ಶಾಮರಾವ್ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರು ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಲತಾ ಕುಮಾರಿ, ಡಾ. ಎನ್ ಮಂಜುಳಾ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಇನ್ನಿತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸಿದ್ಧರಿದ್ದರು.

Leave a Reply

Your email address will not be published. Required fields are marked *

error: Content is protected !!