ಶಿವಮೊಗ್ಗ:ಎಸ್ ಬಿ ಐ ಮ್ಯಾನೇಜರ್ ನೇಣಿಗೆ ಶರಣು

ಶಿವಮೊಗ್ಗ: ಜೋಗ್ ಫಾಲ್ಸ್ ಎಸ್‍ಬಿಐ ಶಾಖೆಯ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರ ವರದಿಯಾಗಿದೆ.

ಜಿಲ್ಲೆಯ ಸಾಗರ ತಾಲೂಕಿನ ಜೋಗದಲ್ಲಿ ಎಸ್‍ಬಿಐ ಶಾಖೆಯ ಮ್ಯಾನೇಜರ್ ಆಗಿದ್ದ ಅನಿಲ್ ಕುಮಾರ್ (35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಕೆಲಸದ ಒತ್ತಡ, ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದ್ದು ಅನಿಲ್ ಅವರ ಕುಟುಂಬಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಎರಡು ದಿನಗಳಿಂದ ರಜೆಯಲ್ಲಿದ್ದ ಅನಿಲ್ ಕುಮಾರ್ ಇಂದು ಶಾಖೆಯ ಬಾಗಿಲು ತೆರಿದ್ದಾರೆ. ಆದರೆ ಕೆಲವೇ ಸಮಯದಲ್ಲಿ ಮತ್ತೆ ಮನೆಗೆ ಹೋದ ಅವರು ಪತ್ನಿಯನ್ನು ಹೊರಗೆ ಕಳಿಸಿದ್ದು ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸಂಬಂಧ ಜೋಗ್ ಫಾಲ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!