ನಳಿನ್ ಕುಮಾರ್ ಕಟೀಲ್ ಕಚೇರಿಗೆ‌ ಮುತ್ತಿಗೆ ಹಾಕಲು ಸಿಎಫ್ಐ ಕಾರ್ಯಕರ್ತರ ಯತ್ನ

ಮಂಗಳೂರು: ಈಡಿ ಅಧಿಕಾರಿಗಳು ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್  ಅವರನ್ನು ಬಂಧಿಸಿರುವುದನ್ನು ಪಿಎಫ್ ಐ ಖಂಡಿಸಿ‌ದೆ. ಈ ವಿಚಾರಕ್ಕೆ ಸಂಬಂಧಿಸಿ ಇಂದು ಸಿಎಫ್ಐ ಕಾರ್ಯಕರ್ತರು‌ ದ.ಕ.ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ‌ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಬಂಧನ‌ ಖಂಡಿಸಿ ಸಿಎಫ್ಐ ಕಾರ್ಯಕರ್ತರು ಪ್ರತಿಭಟನಾ ಮಾರ್ಚ್ ನಡೆಸಲು‌ ಸಿದ್ಧತೆ ನಡೆಸಿದ್ದರು, ಆದರೆ ಪೊಲೀಸರು ಅನುಮತಿ ‌ನೀಡದ ಕಾರಣ ಪ್ರತಿಭಟನೆ ನಡೆಸಿ‌ ಆಕ್ರೋಶ ವ್ಯಕ್ತಪಡಿಸಿದರು. ಡಿಸಿ‌ ಕಚೇರಿಯ ‌ಮುಂದೆ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ‌ಘೋಷಣೆ‌ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ವೇಳೆ ಕಾರ್ಯಕರ್ತರು ಡಿಸಿ ಕಚೇರಿ ದಾಟಿ ಸಂಸದರ ಕಚೇರಿಗೆ ಮುತ್ತಿಗೆ‌ ಹಾಕಲು ಯತ್ನಿಸಿದ್ದು, ಪೊಲೀಸರು ಹಲವು ನಾಯಕರು ಹಾಗೂ ಕಾರ್ಯಕರ್ತರನ್ನು‌ ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!