ಮಂಗಳೂರು: ಲಾಡ್ಜ್ನಲ್ಲಿ ಬೆಂಕಿ – ಸಂಶಯಾಸ್ಪದ ಸ್ಥಿತಿಯಲ್ಲಿ ವ್ಯಕ್ತಿ ಮೃತ ದೇಹ ಪತ್ತೆ
ಮಂಗಳೂರು: ಲಾಡ್ಜ್ ನ ಕೊಠಡಿವೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಸಂಶಯಾಸ್ಪದ ರೀತಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಯಶ್ರಾಜ್ ಎಸ್.ಸುವರ್ಣ(43) ಮೃತಪಟ್ಟವರು ಎಂದು ತಿಳಿದುಬಂದಿದೆ.
ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಮಧ್ಯರಾತ್ರಿ ಬಳಿಕ ಸುಮಾರು 12:35 ಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.
ಯಶ್ರಾಜ್ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದು, ಬಾಗಿಲಿನ ಚಿಲಕ ಹಾಕಿಕೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅನಂತರ ಲಾಡ್ಜ್ ನವರು ತೆರೆದಾಗ ಬೆಂಕಿ ಆವರಿಸಿತ್ತು. ಸ್ಥಳಕ್ಕೆ ಆಗಮಿಸಿದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಬೆಂಕಿ ನಂದಿಸಿದ್ದಾರೆ.