ರಜತ ಸಂಭ್ರಮದಲ್ಲಿ ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್‌ & ಆರ್ಕಿಟೆಕ್ಟ್

ಉಡುಪಿ: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್‌ ಆ್ಯಂಡ್ ಆರ್ಕಿಟೆಕ್ಟ್ (ಎಸಿಸಿಇಎ) ಉಡುಪಿ ಇದರ ರಜತಮೋಹೋತ್ಸವದ ಲಾಂಛನ ಬಿಡುಗಡೆ ಹಾಗೂ ವಿವಿಧ ಸಮಾಜಮುಖಿ ಕಾರ್ಯಗಳ ಉದ್ಘಾಟನೆ ಶನಿವಾರ ನಡೆಯಿತು.  

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರಾವಳಿ ಕಾವಲು ಪೊಲೀಸ್ ಪಡೆಯ ಅಧೀಕ್ಷಕರಾದ ಮಿಥುನ್ ರವರು  ದೀಪ ಬೆಳಗಿಸಿ, ಲಾಂಛನ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಉಡುಪಿ ನಗರದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ರವರ ಪಾತ್ರ ಮಹತ್ವದಾಗಿದೆ ಎಂದರು. ಸಮಾರಂಭದಲ್ಲಿ ಎಸಿಸಿಇಎ ಅಧ್ಯಕ್ಷರಾದ ಯೋಗೀಶ್ಚಂದ್ರ, ಕಾರ್ಯದರ್ಶಿ ಮಹೇಶ್ ಕಾಮತ್, ಖಂಚಾಚಿ ಅಮಿತ್ ಅರವಿಂದ್ ನಾಯಕ್, ಕಾನೂನು ಸಲಹೆಗಾರ ಭಗವಾನ್ ದಾಸ್, ಶಶಿಧರ್ ಉಪಸ್ಥಿತರಿದ್ದರು.                 

Leave a Reply

Your email address will not be published. Required fields are marked *

error: Content is protected !!