ದಲಿತರ, ಅಂಬೇಡ್ಕರ್ ಅವಹೇಳನ: ಹಿಂದು ಜಾಗರಣ ವೇದಿಕೆಯಿಂದ ಉಮೇಶ್ ನಾಯ್ಕ ಉಚ್ಚಾಟನೆ

Oplus_131072

ಉಡುಪಿ: ದಲಿತ ಸಮಾಜ ಮತ್ತು ಅಂಬೇಡ್ಕರ್ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನ ಮಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ಉಮೇಶ್ ನಾಯ್ಕ್ ಅವರನ್ನು ತಕ್ಷಣದಿಂದ ಹಿಂದು ಜಾಗರಣ ವೇದಿಕೆಯ ಎಲ್ಲಾ ಜವಾಬ್ದಾರಿಯಿಂದ ಮುಕ್ತಗೊಳಿಸ ಲಾಗಿದೆಂದು ವೇದಿಕೆಯ ಜಿಲ್ಲಾ ಸಂಯೋಜಕ ಶಂಕರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂಧಿತ ಉಮೇಶ್ ನಾಯ್ಕ್ ಅವರ ಮಾತುಗಳಿಗೆ ಸಂಪೂರ್ಣವಾಗಿ ಅವರೇ ಹೊಣೆಯಾಗಿದ್ದು ಅವರ ಮಾತುಗಳಿಗೂ ಮತ್ತು ಹಿಂದು ಜಾಗರಣ ವೇದಿಕೆಯ ನಿಲುವಿಗೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಜಾಗೃತ, ಸಂಘಟಿತ ಹಿಂದೂ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ಕಳೆದ 35-40 ವರ್ಷಗಳಿಂದ ಕೆಲಸ ಮಾಡುತ್ತಿರುವ ಹಿಂದು ಜಾಗರಣ ವೇದಿಕೆಯಲ್ಲಿ ಎಲ್ಲ ಜಾತಿ, ಸಮುದಾಯದ ಹಿಂದೂಗಳು ಒಂದಾಗಿ ಯುವಕರಲ್ಲಿ ರಾಷ್ಟ್ರಭಕ್ತಿ, ಧರ್ಮನಿಷ್ಠೆ ಬೆಳೆಸುವ ಕಾರ್ಯದಲ್ಲಿ ನಿರತರಾಗಿದ್ದು ಇಂತಹ ಅಪಸವ್ಯಗಳನ್ನು ಎಂದಿಗೂ ಸಹಿಸುವುದಿಲ್ಲ ಎಂದಿದ್ದಾರೆ.

ಹಿಂದು ಜಾಗರಣ , ಉಡುಪಿ ಜಿಲ್ಲೆ

Leave a Reply

Your email address will not be published. Required fields are marked *

error: Content is protected !!