ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ಮತ್ತೆ ವಜಾ

ಉಡುಪಿ : ಅನಿವಾಸಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿಯನ್ನು ಮತ್ತೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.

ಅನಾರೋಗ್ಯ ಪೀಡಿತ ತಂದೆ ಯನ್ನು ನೋಡಲು ಒಂದು ತಿಂಗಳ ಕಾಲ ಜಾಮೀನು ನೀಡುವಂತೆ ಕೋರಿ ನಿರಂಜನ್ ಭಟ್ ತನ್ನ ವಕೀಲ ವಿಕ್ರಂ ಹೆಗ್ಡೆ ಮೂಲಕ ಜು.೩೦ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ಚಂದ್ರಶೇಖರ್ ಎಂ. ಜೋಶಿ ಆರೋಪಿಗೆ ಜಾಮೀನು ನಿರಾಕರಿಸಿ ಆದೇಶ ನೀಡಿದರು.

ಅನಾರೋಗ್ಯದಿಂದ ಮಂಗಳೂರಿನ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿಯ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ತಂದೆ ಕೂಡ ಈ ಪ್ರಕರಣದ ಸಾಕ್ಷಿ ನಾಶ ಆರೋಪಿ ಶ್ರೀನಿವಾಸ್ ರಾವ್, ಅವರನ್ನು ಪೊಲೀಸ್ ಭದ್ರತೆ ಯಲ್ಲಿ ಒಂದು ದಿನ ಭೇಟಿ ಮಾಡಲು ನ್ಯಾಯಾಧೀಶರು ಅವಕಾಶ ನೀಡಿದ್ದಾರೆ. ಅದಕ್ಕಾಗಿ ಮೊದಲು ಆರೋಪಿಯನ್ನು ತಾತ್ಕಾಲಿಕವಾಗಿ ಮಂಗಳೂರು ಸಬ್ ಜೈಲಿಗೆ ಸ್ಥಳಾಂತರಿಸುವಂತೆ ಸಂಬಂಧ ಪಟ್ಟವರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!