ಪೊಲೀಸ್ ಗೆ ಹಲ್ಲೆ ನಡೆಸಿದ ಆರೋಪಿ ಪರಾರಿಯಾಗಲು ಯತ್ನ: ಗುಂಡೇಟು

ಬೆಂಗಳೂರು: ಸಂಜಯನಗರದಲ್ಲಿ ಬುಧವಾರ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಒಂದನೇ ಆರೋಪಿಯ ಕಾಲಿಗೆ ಪೊಲೀಸರು ಗುರುವಾರ ನಸುಕಿನಲ್ಲಿ ಗುಂಡು ಹೊಡೆದಿದ್ದಾರೆ.

ಆರೋಪಿ ತಾಜುದ್ದೀನ್‌ನನ್ನು ಇಂದು ನಸುಕಿನಲ್ಲಿ ಮಹಜರು ನಡೆಸಲು ಘಟನಾ ಸ್ಥಳಕ್ಕೆ ಕರೆದೊಯ್ದು ವೇಳೆ ಆತ ಪರಾರಿಯಾಗಲು ಯತ್ನಿಸಿದ. ಸ್ವಲ್ಪ ದೂರ ಓಡಿದ ಆರೋಪಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆ, ಆತ ಕಲ್ಲು ಮತ್ತು ಇಟ್ಟಿಗೆ  ಎಸೆದಿದ್ದಾನೆ.

ಈ ವೇಳೆ ಪಿಎಸ್ಐ ರೂಪಾ ಮತ್ತು ಹೆಡ್ ಕಾನ್‌ಸ್ಟೆಬಲ್ ಮಂಜಣ್ಞ ಅವರ ಮೇಲೆ ಆರೋಪಿ ಹಲ್ಲೆ ನಡೆಸಿದ್ದಾನೆ.

ತಕ್ಷಣ ಸಂಜಯನಗರ ಇನ್‌ಸ್ಪೆಕ್ಟರ್ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಆದರೂ  ಆರೋಪಿ ಶರಣಾಗದಿದ್ದಾಗ ಎಡಗಾಲಿಗೆ ಗುಂಡು ಹೊಡೆದಿದ್ದಾರೆ.

ಗಾಯಗೊಂಡಿರುವ ಆರೋಪಿ ಮತ್ತು ಪೊಲೀಸ್ ರನ್ನು ಬಾಪ್ಟಿಸ್ಸ್ ಆಸ್ಪತ್ರೆ ಗೆ ದಾಖಲಿಸಲಾಗಿದೆ ಡಿಸಿಪಿ ಶಶಿಕುಮಾರ್ ತಿಳಿಸಿದರು 

Leave a Reply

Your email address will not be published. Required fields are marked *

error: Content is protected !!