ಜಾನಪದ ಗಾಯಕಿ ಆರೋಗ್ಯ ವಿಚಾರಿಸಿದ ಅನಂತ್ ಕುಮಾರ್ ಹೆಗಡೆ

ಕಾರವಾರ: ಅನಾರೋಗ್ಯದಿಂದ ಉತ್ತರಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಾನಪದ ಗಾಯಕಿ ಪದ್ಮಶ್ರೀ ಸುಕ್ರಿ ಬೊಮ್ಮ ಗೌಡ ಅವರ ಆರೋಗ್ಯವನ್ನು ಸಂಸದ ಅನಂತಕುಮಾರ್ ಹೆಗಡೆ ವಿಚಾರಿಸಿದರು.

ನಗರದ ಜಿಲ್ಲಾ ಆಸ್ಪತ್ರೆಗೆ ತೆರಳಿದ ಅವರು ಸುಕ್ರಜ್ಜಿ ಬಳಿ ಆರೋಗ್ಯ ವಿಚಾರಿಸಿದರು. ಬಳಿಕ ವೈದ್ಯರಿಂದ ಮಾಹಿತಿ ಪಡೆದ ಅವರು ಅವಶ್ಯವಿರುವ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಈ ವೇಳೆ ಶಾಸಕಿ ರೂಪಾಲಿ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಉಸಿರಾಟದ ಸಮಸ್ಯೆ ಹಾಗೂ ಕಪದಿಂದಾಗಿ ಸುಕ್ರಜ್ಜಿ ತುಸು ಸಂಕಷ್ಟ ಎದುರಿಸುತ್ತಿದ್ದಾರೆ.ಸುಕ್ರಜ್ಜಿ ಆರೋಗ್ಯ ವಿಚಾರಿಸಿದ ಸಂಸದ ಅನಂತಕುಮಾರ್

Leave a Reply

Your email address will not be published. Required fields are marked *

error: Content is protected !!