ಶ್ರೀ ಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ ವತಿಯಿಂದ ನಡೆಯುವ ಅನ್ನಸಂತರ್ಪಣೆ

ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜಯಂತಿಯ ವಿಟ್ಲಪಿಂಡಿಯಂದು ನಡೆಯುವ ಅನ್ನಸಂತರ್ಪಣೆಗೆ ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪಲ್ಲಪೂಜೆ ನೆರವೇರಿಸಿದರು. 

ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಶ್ರೀಕೃಷ್ಣ ಜಯಂತಿಯ ವಿಟ್ಲಪಿಂಡಿಯಂದು ಶ್ರೀ ಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ ವತಿಯಿಂದ  ನಡೆಯುವ ಅನ್ನಸಂತರ್ಪಣೆಗೆ   ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಪ್ರಸಾದ ವಿತರಣೆ ಮಾಡುವ ಮೂಲಕ ಚಾಲನೆ ನೀಡಿದರು.

 ಶ್ರೀ ಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿಯ ಭುವನೇಂದ್ರ ಕಿದಿಯೂರು,ಯುವರಾಜ್ ಪಿತ್ರೋಡಿ,ಹರಿಯಪ್ಪ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!