ಅತ್ತೆಯನ್ನೆ ಹತ್ಯೆಗೈದ ಆರೋಪಿ ಬಂಧನ

ಮಡಿಕೇರಿ: ತನ್ನ ಅತ್ತೆಯನ್ನೆ ಹತ್ಯೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ವೀರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಮನು ಅಲಿಯಾಸ್ ಮುತ್ತ ಎಂಬಾತನೆ ಬಂಧಿತ ಆರೋಪಿಯಾಗಿದ್ದು, ಹತ್ಯೆಗೆ ಬಳಸಿದ್ದ ಮಾರಕಾಯುಧವನ್ನು ವಶಪಡಿಸಿಕೊಳ್ಳಲಾಗಿದೆ.

ಜೂನ್ ೮ ರಂದು ವೀರಾಜಪೇಟೆ ಸಮೀಪದ  ಬೋಯಿಕೇರಿ ಗ್ರಾಮದಲ್ಲಿ ವಾಸವಿದ್ದ ತನ್ನ ಅತ್ತೆ  ಗೌರಿ ಎಂಬವರನ್ನು  ಅಳಿಯ ಮನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ. ಘಟನೆಗೆ ಸಂಬಂಧಿಸಿದಂತೆ ಗೌರಿಯ ಮಗಳು ನೀಡಿದ ದೂರಿನ ಅನ್ವಯ ವೀರಾಜಪೇಟೆ ಗಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗಾಗಿ ಎರಡು ವಿಶೇಷ ತಂಡಗಳನ್ನು ರಚಿಸಿದ್ದರು.

ಚೆಯ್ಯಂಡಾಣೆ ಬೇಕರಿ ಸಮೀಪ ಆರೋಪಿ ಮನುವನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ದುಷ್ಕೃತ್ಯಕ್ಕೆ ಬಳಸಿದ್ದ ಚಾಕು ಮತ್ತು ಮರದ ತುಂಡನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!