ವಿಧಾನಸೌಧದಲ್ಲಿ ವ್ಯಕ್ತಿಯೋರ್ವ ಕತ್ತುಕೊಯ್ದು ಆತ್ಮಹತ್ಯೆಗೆ ಪ್ರಯತ್ನ

ಬೆಂಗಳೂರು: ವಿಧಾನಸೌಧದಲ್ಲಿ ವ್ಯಕ್ತಿಯೋರ್ವ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಸೌಧದ ಮೂರನೇ ಮಹಡಿಯ ಶೌಚಾಲಯ ಕೊಠಡಿ ಸಂಖ್ಯೆ 332ರಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ. ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.

ಸರ್ಕಾರಿ ಕಚೇರಿಗಳಲ್ಲಿ ಸೆಕ್ಯೂರಿಟಿ ಲ್ಯಾಪ್ಸ್, ಲೋಕಾಯುಕ್ತರ ಚಾಕು ಇರಿತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಕೆಂದ್ರ ವಿಭಾಗ ಡಿಸಿಪಿ ದೇವರಾಜ್, ಅಡಿಷನಲ್ ಸಿಪಿ ಅವರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಹೈ ಸೆಕ್ಯೂರಿಟಿ ಇದ್ರೂ ಮಾರಣಾಂತಿಕ ಆಯುಧಗಳು ತೆಗೆದುಕೊಂಡು ಹೋಗಿದ್ದು ಹೇಗೆ? ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!