ಅಗಸ್ಟ್ 11: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಕೆಥೊಲಿಕ್ ಜನಪ್ರತಿನಿಧಿಗಳ ಸಹಮಿಲನ

ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಅಗಸ್ಟ್ 11 ರಂದು ಭಾನುವಾರ ಮಧ್ಯಾಹ್ನ 3 ಗಂಟೆಗೆ ಉಡುಪಿ ಶೋಕ ಮಾತಾ ಚರ್ಚಿನ ಸಭಾಂಗಣದಲ್ಲಿ ಕೆಥೊಲಿಕ್ ಜನಪ್ರತಿನಿಧಿಗಳ ಸಹಮಿಲನವನ್ನು ಆಯೋಜಿಸಲಾಗಿದೆ.

ಸಹಮಿಲನದ ಅಧ್ಯಕ್ಷತೆಯನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್ ವಹಿಸಲಿದ್ದು, ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ. ಡಾ ಜೆರಾಲ್ಡ್ ಐಸಾಕ್ ಲೋಬೊ ಸಹಮಿಲವನ್ನು ಉದ್ಘಾಟಿಸಲಿದ್ದಾರೆ. ಪ್ರಮುಖ ಭಾಷಣಕಾರರಾಗಿ ಮಾನವ ಬಂಧುತ್ವ ವೇದಿಕೆ ಇದರ ಪಂಚಾಯತ್ ರಾಜ್ ರಾಜ್ಯ ಸಂಚಾಲಕ ವಿಲ್ ಫ್ರೆಡ್ ಡಿಸೋಜಾ ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಧ್ಯಾತ್ಮಿಕ ನಿರ್ದೇಶಕ ವಂ ಫರ್ಡಿನಾಂಡ್ ಗೊನ್ಸಾಲ್ವಿಸ್, ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ವಿಲ್ಸನ್ ರೊಡ್ರಿಗಸ್, ಉಡುಪಿ ತಾಲೂಕು ಪಂಚಾಯತ್ ಸದಸ್ಯ ಮೈಕಲ್ ರಮೇಶ್ ಡಿಸೋಜಾ, ಕುಂದಾಪುರ ತಾಲೂಕು ಪಂಚಾಯತ್ ಸದಸ್ಯ ವೈಲೆಟ್ ಬಾರೆಟ್ಟೊ, ಕಾರ್ಕಳ ಪುರಸಭಾ ಸದಸ್ಯ ವಿನ್ನಿಬೋಲ್ಡ್ ಮೆಂಡೊನ್ಸಾ, ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ನಿಕಟಪೂರ್ವ ಅಧ್ಯಕ್ಷ ವಲೇರಿಯನ್ ಆರ್ ಫೆರ್ನಾಂಡಿಸ್ ಉಪಸ್ಥಿತರಿರುವರು.

ಪ್ರಮುಖ ಭಾಷಣಕ್ಕೆ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜಿತೇಂದ್ರ ಫುರ್ಟಾಡೊ ಮತ್ತು ಪೇತ್ರಿ ಗ್ರಾಮ ಪಂಚಾಯತ್ ಸದಸ್ಯೆ ಜೆನವಿವ್ ಡಿಸೋಜಾ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ರಾಜಕೀಯ ಮತ್ತು ಸರಕಾರಿ ಸವಲತ್ತುಗಳ ಸಮಿತಿ ಸಂಚಾಲಕಿ ಮೇರಿ ಡಿಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!