ಬಂಟ್ವಾಳ: ಪಾಕಿಸ್ತಾನದ ಧ್ವಜ ಹರಿಯಬಿಟ್ಟಾತನ ವಿರುದ್ದ ದೂರು

ಬಂಟ್ವಾಳ : ಸ್ವಾತಂತ್ರ್ಯ ದಿನಾಚರಣೆಯಂದು ವಿದೇಶದಲ್ಲಿರುವ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಕಲಾಬಾಗಿಲ ನಿವಾಸಿಯೊಬ್ಬ ಪಾಕಿಸ್ಥಾನದ ಧ್ವಜದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಸಮಾಜದಲ್ಲಿ  ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾನೆಂದು ಆರೋಪಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲಾಬಾಗಿಲಿನ ಮಹಮ್ಮದ್ ನದೀಮ್ ಎಂಬಾತ  ಸದ್ಯ ವಿದೇಶದಲ್ಲಿದ್ದು,ಸ್ವಾತಂತ್ರ್ಯ ದಿನಾಚರಣೆಯಂದು  ಪಾಕಿಸ್ತಾನ ಧ್ವಜದ ಚಿತ್ರ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ.ಆತನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.ಇರ್ವತ್ತೂರಿನ ದೇವಿಪ್ರಸಾದ್ ಶೆಟ್ಟಿ ಅವರು ಈ ದೂರು ಸಲ್ಲಿಸಿದ್ದು,ಈ ಸಂದರ್ಭ ದಿನೇಶ್ ಶೆಟ್ಟಿ ಮೊದಲಾದವರಿದ್ದರು.
ಈ ಪ್ರಕರಣವನ್ನು  ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಹಿರಿಯ  ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Attachments area

Leave a Reply

Your email address will not be published. Required fields are marked *

error: Content is protected !!