ಬಳ್ಳಾರಿ : ಮುಚ್ಚಿದ ಬಾರ್ ಓಪನ್ ಮಾಡಿ ಅಂತ ಗ್ರಾಮಸ್ಥರ ಪ್ರತಿಭಟನೆ!

ಬಳ್ಳಾರಿ: ಮದ್ಯದಂಗಡಿ ಮುಚ್ಚಬೇಕು ಎಂದು ಗ್ರಾಮಸ್ಥರು ಪ್ರತಿಭಟಿಸಿರುವ ಸುದ್ದಿ ನೀವು ಕೇಳಿರಬಹುದು. ಆದರೆ ಬಾರ್ ಬೇಕೇ ಬೇಕು ಎಂದು ಎಣ್ಣೆ ಪ್ರಿಯರು ಪಂಚಾಯತ್ ಮುಂದೆ ಪ್ರತಿಭಟಿಸಿ ಆಗ್ರಹಿಸಿದ ವಿಲಕ್ಷಣ ಘಟನೆ ನಡೆದಿದೆ.
ಹೂವಿನಹಡಗಲಿ ತಾಲೂಕಿನ ಸೋವೇನಹಳ್ಳಿ ಗ್ರಾಮ ಪಂಚಾಯಿತಿ ಕಛೇರಿಯ ಮುಂಭಾಗದಲ್ಲಿ ಗ್ರಾಮಸ್ಥರು ಬಾರ್ ಓಪನ್ ಮಾಡುವಂತೆ ಪ್ರತಿಭಟನೆ ನಡೆಸಿದ್ದಾರೆ.

ಗ್ರಾಮದಲ್ಲಿ ಹಿಂದೆ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಈ ಗ್ರಾಮದ ಮದ್ಯಪ್ರಿಯರ ಬೇಡಿಕೆಯಂತೆ ಗ್ರಾಮಕ್ಕೆ ಒಂದು ಎಂಎಸ್‍ಐಎಲ್ ವೈನ್ ಶಾಪ್ ಮಂಜೂರಾಗಿ, ಪ್ರಾರಂಭಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತಿತ್ತು. ಈ ಸಂದರ್ಭದಲ್ಲಿ ಸೋವೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವರು ನಮ್ಮ ಗ್ರಾಮದಲ್ಲಿ ಮದ್ಯದ ಅಂಗಡಿ ತೆರೆಯುವುದು ಬೇಡ ಎಂದು ವಿರೋಧ ವ್ಯಕ್ತಪಡಿಸಿದ್ದರು.

ವಿರೋಧ ಜೋರಾದ ಕಾರಣ ವೈನ್ ಶಾಪ್ ಆರಂಭವಾಗುವುದು ತಡವಾಗಿತ್ತು. ಹೀಗಾಗಿ ಇಂದು ಗ್ರಾಮದ ಎಣ್ಣೆ ಪ್ರೀಯರು ಬಾರ್ ಕೂಡಲೇ ಓಪನ್ ಮಾಡಲೇಬೇಕೆಂದು ಆಗ್ರಹಿಸಿ ಗ್ರಾಮ ಪಂಚಾಯತಿ ಮುಂದೆ ಪ್ರತಿಭಟಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!