ಸ್ಪೀಕರ್ ರಮೇಶ್ ಕುಮಾರ್ ಗೆ ಧೈರ್ಯ ನೀಡುವಂತೆ ಬಿಜೆಪಿ ಕಾರ್ಯಕರ್ತರು ಶಕ್ತಿದೇವತೆಯ ಮೊರೆ

ಮಂಡ್ಯ: ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಧೈರ್ಯ ನೀಡುವಂತೆ ಬಿಜೆಪಿ ಕಾರ್ಯಕರ್ತರು ಶಕ್ತಿದೇವತೆಯ ಮೊರೆ ಹೋಗಿ, ಸ್ಪೀಕರ್ ಹೆಸರಲ್ಲಿ ಅರ್ಚನೆ ಮಾಡಿ ಈ ರಾಜಕೀಯ ಹೈಡ್ರಾಮಾಕ್ಕೆ ಮುಕ್ತಿ ದೊರಕಲಿ ಎಂದು ಬೇಡಿಕೊಂಡಿದ್ದಾರೆ.

ಸ್ಪೀಕರ್ ಗಾಗಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತೆ ಸಿಎಂ ಆಗಲಿ ಎಂದು ಮಂಡ್ಯದ ಶಕ್ತಿದೇವತೆ ಕಾಳಿಕಾಂಭ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಹಾವು ಸಾಯಬಾರದು ಕೋಲು ಮುರಿಯಬಾರದು ಎಂಬಂತೆ ಸ್ಪೀಕರ್ ಸದನ ನಡೆಸುತ್ತಿದ್ದಾರೆ. ಆಡಳಿತ ಪಕ್ಷದ ಭಯ ಸ್ಪೀಕರ್ ಅವರನ್ನು ಕಾಡುತ್ತಿದ್ಯ ಎಂಬ ಅನುಮಾನ ಕಾಡುತ್ತಿದೆ. ಹೀಗಾಗಿ ಅವರಿಗೆ ಕಾಳಿಕಾಂಭ ದೇವಿ ಧೈರ್ಯ ತುಂಬಲಿ ಎಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ಕಮಲ ಕಾರ್ಯಕರ್ತರು ಟಾಂಗ್ ಕೊಟ್ಟಿದ್ದಾರೆ.

ಯಡಿಯೂರಪ್ಪನವರಿಗೆ ಎದುರಾಗಿರುವ ತೊಡಕುಗಳು ನಿವಾರಣೆಯಾಗಲಿ. ಬಿಎಸ್‍ವೈ ಮತ್ತೆ ಸಿಎಂ ಆಗಲಿ ಎಂದು ಅಷ್ಟ ದಿಕ್ಕುಗಳಲ್ಲೂ ತಡೆ ಹೊಡೆಸಿದ್ದೇವೆ. ದೇವಾಲಯದ ಸುತ್ತಲೂ ಉರುಳುಸೇವೆ ಮಾಡಿ ದೇವಿಗೆ ಪ್ರಾರ್ಥಿಸಿದ್ದೇವೆ ಎಂದು ಕಾರ್ಯಕರ್ತರು ಹೇಳಿದರು.

Leave a Reply

Your email address will not be published. Required fields are marked *

error: Content is protected !!