ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘ: ಗೀತಾಂಜಲಿ ಆಯ್ಕೆ

ಬೆಂಗಳೂರು : ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಶ್ರೀ ನಾರಾಯಣಗುರು ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಈಡಿಗ ಬಿಲ್ಲವ ಸಮಾಜದ 26 ಉಪಜಾತಿಗಳ ಮಹಿಳೆಯರನ್ನು ಸಂಘಟನೆ ಮಾಡಿ ಮಹಿಳೆಯರ ಧ್ವನಿಯಾಗಲು ಸಮಾಜದ ಸ್ವಾಮೀಜಿಗಳು ಹಾಗೂ ಹಿರಿಯರ ಸಮ್ಮುಖದಲ್ಲಿ ರಾಜ್ಯಾಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಸದಸ್ಯೆ, ಸಮಾಜ ಸೇವಕಿ ಗೀತಾಂಜಲಿ ಸುವರ್ಣ ರವರನ್ನು ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.


ಈಡಿಗ ಬಿಲ್ಲವ ನಾಮದಾರಿ ಸಮಾಜದ 26 ಉಪಜಾತಿಗಳ ಹೆಣ್ಣು ಮಕ್ಕಳು ಮಹಿಳೆಯರನ್ನು ಒಗ್ಗೂಡಿಸಿ ಸಂಘಟನೆಯ ಮುಖೇನ ಅವರ ಧ್ವನಿಯನ್ನು ಗಟ್ಟಿಗೊಳಿಸುವ ಮತ್ತು ಸಮಾಜದ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ಗೀತಾಂಜಲಿ ಸುವರ್ಣ ರವರಿಗೆ ನೀಡಲಾಗಿದೆ. ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ರಾಜ್ಯಾಧ್ಯಕ್ಷರಾದ ಸೈದಪ್ಪ ಕೆ ಗುತ್ತೇದಾರ, ಗೀತಾಂಜಲಿ ಸುವರ್ಣ ಅವರ ಮಹಿಳಾ ರಾಜ್ಯಾಧ್ಯಕ್ಷೆ ಘೋಷಣೆಯನ್ನು ಮಾಡಿದ್ದಾರೆ.

4 thoughts on “ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘ: ಗೀತಾಂಜಲಿ ಆಯ್ಕೆ

Leave a Reply to Shrikanth Cancel reply

Your email address will not be published. Required fields are marked *

error: Content is protected !!