ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಭಕ್ತಾದಿಗಳಿಗೆ ಮಜ್ಜಿಗೆ ಸೇವೆ

ಶ್ರೀ ಕೃಷ್ಣ  ಮಠದ ರಥಬೀದಿಯಲ್ಲಿ ನಡೆಯುವ ವಿಟ್ಲಪಿಂಡಿ ಉತ್ಸವದಂದು ಪೇಜಾವರ ಮಠದ ಮುಂಭಾಗದಲ್ಲಿ  ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಆಯೋಜಿಸಿದ ಭಕ್ತಾದಿಗಳಿಗೆ ಮಜ್ಜಿಗೆ ಸೇವೆಯನ್ನು ಪರ್ಯಾಯ  ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು , ಅದಮಾರು ಕಿರಿಯ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಮಜ್ಜಿಗೆ ವಿತರಣೆ ಮಾಡುವ ಮೂಲಕ ಚಾಲನೆ ನೀಡಿದರು.

ಪರಿಷತ್ತಿನ ಅಧ್ಯಕ್ಶರಾದ ವಿಷ್ಣು ಪಾಡಿಗಾರ್,ಕಾರ್ಯದರ್ಶಿ ಪ್ರವೀಣ್ ಉಪಾದ್ಯಾಯ,ಕುಮಾರಸ್ವಾಮಿ ಉಡುಪ,ಮಟ್ಟು  ಲಕ್ಷ್ಮೀನಾರಾಯಣ ರಾವ್ ಹಾಗೂ ಶ್ರೀ ಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿಯ ಭುವನೇಂದ್ರ ಕಿದಿಯೂರು,ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್  ಮೊದಲಾದವರು ಉಪಸ್ಥಿತರಿದ್ದರು.  

Leave a Reply

Your email address will not be published. Required fields are marked *

error: Content is protected !!