ಕಾರುಗಳ ಮುಖಾಮುಖಿ ಡಿಕ್ಕಿ

ಮಡಿಕೇರಿ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ವಕೀಲರೊಬ್ಬರು ಗಾಯಗೊಂಡಿರುವ ಘಟನೆ ಕೊಳತ್ತೋಡು ಬೈಗೋಡು ಗ್ರಾಮದಲ್ಲಿ ನಡೆದಿದೆ.

ವೀರಾಜಪೇಟೆ ನಗರದಿಂದ ಗೋಣಿಕೊಪ್ಪಕ್ಕೆ ತೆರಳುತ್ತಿದ್ದ ಹುಂಡೈ ಕಾರು ಮತ್ತು ಪೊನ್ನಂಪೇಟೆಯಿಂದ ವೀರಾಜಪೇಟೆಗೆ ಆಗಮಿಸುತ್ತಿದ್ದ ಮಾರುತಿ ವ್ಯಾಗನರ್ ಕಾರು ಡಿಕ್ಕಿಯಾಗಿ, ಹುಂಡೈ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವಕೀಲರಾದ ಅಮೃತ್ ಸೋಮಯ್ಯ ಅವರಿಗೆ ಗಾಯಗಳಾಗಿದೆ.

ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದಿರುವ ಗಾಯಾಳುವನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವೀರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು.

Leave a Reply

Your email address will not be published. Required fields are marked *

error: Content is protected !!