ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಬೈಲುಕೊಪ್ಪೆಯ ಇಬ್ಬರ ಸಾವು

ಮಡಿಕೇರಿ: ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಇನ್ನಿಬ್ಬರಿಗೆ ತೀವ್ರ ಗಾಯಗಳುಂಟಾದ ಘಟನೆ ಮಡಿಕೇರಿ ಬೈಲುಕೊಪ್ಪೆ ಯಲ್ಲಿ ನಡೆದಿದೆ.

ಬೈಲುಕೊಪ್ಪೆ ಟಿಬೇಟಿಯನ್ ಶಿಬಿರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರಿನಲ್ಲಿದ್ದ ಬೈಲುಕೊಪ್ಪೆಯ ನಿವಾಸಿ ಕಾರು ಚಾಲಕ ಸುನಿಲ್ (28) ಮತ್ತು 4ನೇ ಕ್ಯಾಂಪಿನ ಬೌದ್ಧ ಸನ್ಯಾಸಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಟಿಬೇಟಿಯನ್ ಸನ್ಯಾಸಿಗಳಿಗೆ ತೀವ್ರ ಗಾಯಗಳುಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಮುಂಜಾನೆ ಬೈಲುಕೊಪ್ಪೆಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟ್ಯಾಕ್ಸಿಯಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಲಾರಿಗೆ ಡಿಕ್ಕಿಯಾದ ಹಿನ್ನೆಲೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾದ ದೃಶ್ಯ ಕಂಡು ಬಂದಿದೆ. ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!