ಡಿ.ಕೆ.ಶಿ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಚಂಡಿಕಾ ಹೋಮ

ಉಡುಪಿ:  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶೀಘ್ರ ಬಿಡುಗಡೆ ಆಗುವಂತೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಲಾಯ್ತು. ಉಡುಪಿಯ ಪ್ರಸಿದ್ಧ  ದೇವಾಲಯ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಇವತ್ತು ಬೆಳಗ್ಗಿನಿಂದ ಚಂಡಿಕಾಹೋಮ ನಡೆಯುತ್ತಿದೆ. ಡಿ.ಕೆ.ಶಿಯವರ ದೊಡ್ಡಪ್ಪ ಮತ್ತು ಚಿಕ್ಕಪ್ಪನ ಮಕ್ಕಳು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಚಂಡಿಕಾ ಹೋಮದ ಹರಕೆಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೊಂಡಿದ್ದರು ಎನ್ನಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಕಾರ್ಯದರ್ಶಿ ಚಂಡಿಕಾಹೋಮ  ಬುಕ್  ಮಾಡಿದ್ದರು. ಪೂಜೆಗೆ ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾಹೋಮ ನಡೆಸಲಾಗುತ್ತಿದೆ. ಶಿವಕುಮಾರ್ ಅವರ ಸಂಕಷ್ಟಗಳೆಲ್ಲ ಪರಿಹಾರವಾಗಿ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆಯೂ ನಡೆಯಿತು. ರಾಜ್ಯ ಕಾಂಗ್ರೆಸ್‍ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!