ನೀರ ಟ್ಯಾಂಗ್ ಬಿದ್ದು ಮಗು ಸಾವು

ಶಿರಸಿ : ಮನೆಯ ಅಂಗಳದಲ್ಲಿ ಆಡುತ್ತಿದ್ದ 3 ವರ್ಷದ ಮಗುವೊಂದು ಆಕಸ್ಮಿಕವಾಗಿ ನೀರಿನ ಟ್ಯಾಂಕ್ ಗೆ ಬಿದ್ದು ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಉತ್ತರ ಕನ್ನಡದ ಶಿರಸಿ ನಗರದಲ್ಲಿ ನಡೆದಿದೆ.

ಶಿರಸಿ ನೆಹರೂ ನಗರದ ಕೆನರಾ ಗಲ್ಲಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕೂಲಿ ಕೆಲಸ ಮಾಡುತ್ತಿದ್ದ ಯಲ್ಲಪ್ಪ ಪಾಳೇದ್ ಮತ್ತು ಲಲಿತಾ ದಂಪತಿಯ ಮಗ ಬಸವರಾಜ ಪಾಳೇದ್ (3) ಮೃತಪಟ್ಟ ಮಗುವಾಗಿದೆ. ಪಾಲಕರು ಕೂಲಿ ಕೆಲಸಕ್ಕೆ ತೆರಳಿದ್ದಾಗ 9 ವರ್ಷದ ಅಕ್ಕನೊಂದಿಗೆ ಮನೆಯಲ್ಲಿ ಆಟವಾಡಿಕೊಂಡಿದ್ದ ಮಗು ಮಳೆ ನೀರು ಶೇಖರಿಸಲು ಮಾಡಿದ್ದ ನೆಲ ಮಟ್ಟದ ನೀರಿನ ಟ್ಯಾಂಕ್ ಗೆ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

error: Content is protected !!