ಮುಖ್ಯಮಂತ್ರಿ ಯಡಿಯೂರಪ್ಪ ಚಿಲ್ಲರೆ ರಾಜಕೀಯ ಬಿಡಬೇಕು : ಎಚ್ ಡಿ ಕೆ

ಮೈಸೂರು: ರಾಜ್ಯದಲ್ಲಿ ನೆರೆ ನಿರ್ವಹಣೆ ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.

ಮೈಸೂರಿನ ಮಳೆ ಹಾನಿ ಪ್ರದೇಶಕ್ಕೆ ಇಂದು ಭೇಟಿ ನೀಡಿ ಸರಸ್ವತಿಪುರಂನಲ್ಲಿ ಕುಸಿದು ಬಿದ್ದಿದ್ದ ಅಗ್ನಿಶಾಮಕ ದಳ ಕಟ್ಟಡವನ್ನ ಎಚ್ ಡಿ ಕುಮಾರಸ್ವಾಮಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ ನೆರೆ ನಿರ್ವಹಣೆ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಅನಗತ್ಯವಾಗಿ ಟೀಕೆ ಟಿಪ್ಪಣಿ ಹಾಗೂ ರಾಜಕಾರಣ ಮಾಡುವುದಿಲ್ಲ. ರಾಜ್ಯದ ಜನರ ಸಂಕಷ್ಟದಲ್ಲಿದ್ದಾರೆ. ನೊಂದವರಿಗೆ ನೆರವಾಗುವುದೇ ನಮ್ಮ ಮೊದಲ ಆದ್ಯತೆ ಎಂದರು.

ರಾಜ್ಯ ಸರ್ಕಾರದ ಖಜಾನೆ ಸುಸ್ಥಿರವಾಗಿದ್ದು 8 ಸಾವಿರ ಕೋಟಿಯನ್ನ ಮೀಸಲಿಟ್ಟಿದ್ದೇನೆ. ಹಣಕಾಸು ಸ್ಥಿತಿ ಸರಿಯಾಗಿಲ್ಲವೆಂಬ ಮುಖ್ಯಮಂತ್ರಿ ಹೇಳಿಕೆ ಸರಿಯಲ್ಲ.ಯಡಿಯೂರಪ್ಪ ಈ ವಿಚಾರದಲ್ಲಿ ಚಿಲ್ಲರೆ ರಾಜಕೀಯ ಬಿಡಬೇಕು. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ನೆರೆ ಸಂತ್ರಸ್ತರಿಗಾಗಿ ಕೇಂದ್ರ ಸರ್ಕಾರ ನೆರೆ ನಿರ್ವಹಣೆಗೆ ತಕ್ಷಣ ಸ್ಪಂದಿಸಬೇಕು. ಇನ್ನೆರಡು ದಿನಗಳಲ್ಲಿ ಮೈಸೂರಿನ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ ಎಂದು ಇದೇ ವೇಳೆ ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!