ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಳೆ ಉಡುಪಿಗೆ

ಉಡುಪಿ: ಕರಾವಳಿ ಭಾಗದಲ್ಲಿ ಕಳೆದ ಒಂದು ವಾರಗಳಿಂದ ಸುರಿಯುತ್ತಿರುವ ಎಡೆಬಿಡದ ಮಳೆಯಿಂದಾಗಿ ಉಂಟಾದ ಅತೀವೃಷ್ಟಿ ಪ್ರದೇಶಗಳಿಗೆ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ನಾಳೆ ಬೆಳಿಗ್ಗೆ ಮಂಗಳೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಮಂಗಳೂರು ಪ್ರದೇಶದಲ್ಲಿ ಆದಂತಹ ನೆರೆ ಪ್ರದೇಶಗಳಿಗೆ ಭೇಟಿ ನೀಡಿ  ಪರಿಹಾರ ಕಾರ್ಯಗಳ ಬಗ್ಗೆ ಅವಲೋಕನ ನಡೆಸಲಿದ್ದಾರೆ. ನಂತರ  ಉಡುಪಿ ಜಿಲ್ಲೆಗೆ ಭೇಟಿ ನೀಡಿ ಅಲ್ಲಿಂದ ಕಾರವಾರಕ್ಕೆ ತೆರಳಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!