ಕೊರೋನಾ: ಸಾವಿನ ಸಂಖ್ಯೆ 43ಕ್ಕೆ ಏರಿಕೆ,ಸೋಂಕಿತರು 1,300, 120 ಮಂದಿ ಗುಣಮುಖ

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆಸಿದ್ದು, ಸೋಂಕಿನಿಂದ ಬಳಲುತ್ತಿದ್ದ ಕೇರಳ ವ್ಯಕ್ತಿ ಮಂಗಳವಾರ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ವೈರಸ್’ಗೆ ಬಲಿಯಾದವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. 

ಮೃತ ವ್ಯಕ್ತಿಯನ್ನು ಅಬ್ದುಲ್ ಅಜೀಜ್ (68) ಎಂದು ಗುರುತಿಸಲಾಗಿದ್ದು, ಭಾನುವಾರವಷ್ಟೇ ಇವರಲ್ಲಿ ವೈರಸ್ ದೃಢಪಟ್ಟಿತ್ತು. ಬಳಿಕ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಅವರು, ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಇವರ ಸಾವಿನೊಂದಿಗೆ ಕೇರಳ ರಾಜ್ಯದಲ್ಲಿ ವೈರಸ್ ನಿಂದ ಸಾವಿಗೀಡಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. 

ಕೇರಳದ ತಿರುವನಂತಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 68 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಈ ನಡುವೆ ಗಡಹ ಸಚಿವಾಲಯ ಮಾಹಿತಿ ನೀಡಿರುವ ಪ್ರಕಾರ ದೇಶದಲ್ಲಿ ಸೋಂಕಿತರ ಸಂಖ್ಯೆ 1,300ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 120 ಮಂದಿ ಈಗಾಗಲೇ ವೈರಸ್ ನಿಂದ ಗುಣಮುಖರಾಗಿದ್ದಾರೆಂದು ತಿಳಿದುಬಂದಿದೆ. 

Leave a Reply

Your email address will not be published. Required fields are marked *

error: Content is protected !!