ಕೊರೋನಾ ಎಮರ್ಜೆನ್ಸಿ: ಪುತ್ತಿಗೆ ಮಠದಿಂದ 10 ಲಕ್ಷ ರೂ. ದೇಣಿಗೆ

ಉಡುಪಿ (ಉಡುಪಿ ಟೈಮ್ಸ್ ವರದಿ ) ಕೊರೊನಾಕ್ಕೆ ನಲುಗಿದ ಅಶಕ್ತರಿಗೆ ಪುತ್ತಿಗೆ ಮಠದ ವತಿಯಿಂದ ಹತ್ತು ಲಕ್ಷ ದೇಣಿಗೆ ನೀಡಲಾಯಿತು.

ಸುದ್ದಿಗಾರರೊಂದಿಗೆ ಕೊರೋನಾ ಸೋಂಕಿನ ಬಗ್ಗೆ ಮತನಾಡಿದ ಸ್ವಾಮೀಜಿ
ಕೋರನ ವೈರಸ್ಸನ್ನು ಉದ್ದೇಶಪೂರ್ವಕವಾಗಿ ಪಸರಿಸಲಾಗುತ್ತಿದೆ ಈ ಬಗ್ಗೆ ನಮಗೆ ಅನುಮಾನ ಇದೆ ,ಕೋರೊನ ನರಕಾಸುರ ನಂತೆ ಭಾಸವಾಗುತ್ತಿದೆ ,ಕೊರೊನಾವನ್ನು ಉಲ್ಟಾ ಹೇಳಿದರೆ ನರಕ ಎಂದಾಗುತ್ತದೆ ,ನರಕಾಸುರನ ಸಂಹಾರ ಮಾಡಲು ಕೃಷ್ಣನ ಅವತಾರ ಎತ್ತಿ ಬರಬೇಕು ಎಂಬುದಾಗಿ ಅನುಮಾನ ವ್ಯಕ್ತಪಡಿಸಿದರು.

ಮನುಷ್ಯನ ಬದುಕಿಗೆ ಸಸ್ಯಾಹಾರ ಸಾಕು
ಮಾನವ ಸಮುದಾಯ ಮಾಡಿದ ತಪ್ಪುಗಳಿಂದ ಈ ಪರಿಸ್ಥಿತಿ ಬಂದಿದೆ ,ನಾವು ಪ್ರಾಚೀನ ಮೌಲ್ಯಗಳನ್ನು ಬದಿಗೆ ಇಟ್ಟಿದ್ದೇವೆ .ಅನಗತ್ಯ ಪ್ರಾಣಿ ಸಂಹಾರದಿಂದ ಕೋರೋಣ ಬಂದಿದೆ
ಮನುಷ್ಯನ ದೇಹಕ್ಕೆ ಸಸ್ಯಾಹಾರವೇ ಸೂಕ್ತ ,ಮನುಷ್ಯ ಬದುಕಲು ಮಾಂಸಾಹಾರದ ಅಗತ್ಯ ಇಲ್ಲ ,ಜೀವಂತ ಪ್ರಾಣಿಗಳನ್ನು ಹಿಡಿದು ತಿನ್ನುವುದರಿಂದ ಕೋರೋನ ಬಂದಿದೆ .ಮಾನವ ಸಮುದಾಯ ವಿಧ್ವಂಸಕ ಚಿಂತನೆಯಲ್ಲಿ ಸಾಗುತ್ತಿದೆ

ಒಬ್ಬ ದುಷ್ಟನಿಂದ ಜಗತ್ತಿಗೆ ಕರೋನ
ಕರೋನಾದಿಂದ ಜಗತ್ತನ್ನು ನಾಶ ಮಾಡಬಹುದೆಂದು ದುಷ್ಟರಿಗೆ ಗೊತ್ತಾಗಿದೆ, ಉದ್ದೇಶಪೂರ್ವಕವಾಗಿ ಕೊರೋನಾ ಹರಡುವ ಪ್ರಯತ್ನವೂ ಆಗಬಹುದು ,ಒಬ್ಬ ದುಷ್ಟ ನಿಂದ ಸಮಾಜಕ್ಕೆ ದೇಶಕ್ಕೆ ತೊಂದರೆಯಾಗುತ್ತದೆ ,ಜಾಗತಿಕ ವೇದಿಕೆಯಲ್ಲಿ ಕೋರೋಣ ಬಗ್ಗೆ ಚರ್ಚೆಯಾಗಲಿ ,ಈಗಾಗಲೇ ವಿಶ್ವದ ಧಾರ್ಮಿಕ ನಾಯಕರ ಜೊತೆ ಚರ್ಚೆ ನಡೆಸಿದ್ದೇನೆ ,ಕರೋನಾದ ವಿರುದ್ಧ ದೂರಗಾಮಿ ಆಲೋಚನೆಯ ಅಗತ್ಯತೆ ಇದೆ.


ಕರೋನ ದಿಂದ ಪುತ್ತಿಗೆ ಮಠದ ವಿದೇಶಿ ಬ್ರಾಂಚ್ ಗಳಿಗೆ ತೊಂದರೆ
ಇತರ ದೇಶಗಳನ್ನು ಕಂಡು,ಸಮಸ್ಯೆಯ ತೀವ್ರತೆಯನ್ನು ಅರಿಯಬೇಕು, ಕೊರೋನಾದಿಂದ ಪುತ್ತಿಗೆ ಮಠದ ವಿದೇಶಿ ಬ್ರಾಂಚ್ ಗಳಿಗೆ ತೊಂದರೆಯಾಗಿದೆ .ಅಮೆರಿಕ ಲಂಡನ್ ನ 11 ಶಾಖೆಗಳನ್ನು ಮುಚ್ಚಿದ್ದೇವೆ, ಮಠದ ಸಿಬ್ಬಂದಿಗಳು ಅರ್ಚಕರು ಗೊಂದಲದಲ್ಲಿದ್ದಾರೆ ,ವಿದೇಶದ ಸರಕಾರಗಳು ನಮಗೆ ಸಾಕಷ್ಟು ಸಹಾಯ ಮಾಡಿದೆ ಎಂದು ನುಡಿದರು

Leave a Reply

Your email address will not be published. Required fields are marked *

error: Content is protected !!