ಶಾಸಕರ ಮನವೊಲಿಕೆಗೆ ಪಟ್ಟು ಹಿಡಿದು ಕುಳಿತಿದ್ದ ಡಿಕೆಶಿ ಪೊಲೀಸರ ವಶಕ್ಕೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ಸುನಾಮಿ ಎಬ್ಬಿಸಿದೆ. ಶಾಸಕರ ಮನವೊಲಿಕೆಗೆ ಮುಂಬೈಗೆ ತೆರಳಿರುವ ಸಚಿವ ಡಿ. ಕೆ. ಶಿವಕುಮಾರ್‌ಗೆ ಮಹಾರಾಷ್ಟ್ರ ಪೊಲೀಸರು ಹೋಟೆಲ್‌ ಒಳಗೆ ಹೋಗದಂತೆ ತಡೆ ನೀಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಮೈತ್ರಿ ಪಕ್ಷದ ಮುಖಂಡರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ರಾಜ್ಯ ರಾಜಕಾರಣದ ಹೈಡ್ರಾಮ ಸದ್ದು ಮಾಡುತ್ತಿದೆ.

ರಾಜಭವನ ಸಮೀಪ ಕಾಂಗ್ರೆಸ್‌– ಜೆಡಿಸ್ ಪ್ರತಿಭಟನೆ. ಮುಖಂಡರಾದ ಗುಲಾಂನಬಿ ಆಜಾದ್, ವೇಣುಗೋಪಾಲ್, ದೇವೇಗೌಡ, ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.  ‘ಬಿಜೆಪಿ ಶಾಸಕರನ್ನು ಖರೀದಿಸುತ್ತಿದೆ’ ಎಂದು ಅವರು ಆರೋಪಿಸಿದರು.

ಕಾಂಗ್ರೆಸ್‌–ಜೆಡಿಎಸ್‌ ಕಾರ್ಯಕರ್ತರಿಂದ ರಾಜಭವನ ಮುತ್ತಿಗೆ ಯತ್ನ. ರಾಜಭವನಕ್ಕೆ ತೆರಳುವ ದಾರಿಯಲ್ಲಿಯೇ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸ
 ಮುಂಬೈನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ತಡೆದಿರುವ ಮಹಾರಾಷ್ಟ್ರ ಪೊಲೀಸರ ನಡೆಯನ್ನು ಕಾಂಗ್ರೆಸ್‌ ಮುಖಂಡರು ರಾಜ್ಯಸಭೆಯಲ್ಲಿ ಪ್ರಶ್ನಿಸಿದರು.

Leave a Reply

Your email address will not be published. Required fields are marked *

error: Content is protected !!