ಮಾನನಷ್ಟ ಮೊಕದ್ದಮೆ: ಶೋಭಾಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಬಾ ಕರಂದ್ಲಾಜೆ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪಿಎಫ್‌ಐ ಸಂಘಟನೆ ವಿರುದ್ಧ ಮಾಡಲಾದ ಟೀಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಸಂಸದೆ ಶೋಭಾ ಕರಂದ್ಲಾಜೆಗೆ ಜನಪ್ರತಿನಿಧಿಗಳ ನ್ಯಾಯಾಲಯ ರೂ 200 ದಂಡ ವಿಧಿಸಿ ಷರತ್ತುಬದ್ಧ ಜಾಮೀನು ನೀಡಿದೆ.

ಈ ಕುರಿತಂತೆ ಶೋಭಾ ಅವರು ನಿನ್ನೆ ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರ ಮುಂದೆ ಖುದ್ದು ಹಾಜರಾದರು.

ಶೋಭಾ ಪರ ವಕೀಲ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿ ಜಾಮೀನು ಮಂಜೂರು ಮಾಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು. ನ್ಯಾಯಾಲಯಕ್ಕೆ ರೂ 50 ಸಾವಿರ ಮೊತ್ತದ ವೈಯಕ್ತಿಕ ಬಾಂಡ್‌ ಮತ್ತು ರೂ 10 ಸಾವಿರ ನಗದು ಭದ್ರತೆ ಒದಗಿಸಿ’ ಎಂದು ಆದೇಶಿಸಿದ ನ್ಯಾಯಾಧೀಶರು ದಂಡ ವಿಧಿಸಿ ಜಾಮೀನು ಮಂಜೂರು ಮಾಡಿದರು

Leave a Reply

Your email address will not be published. Required fields are marked *

error: Content is protected !!