ಸುವರ್ಣ ತ್ರಿಭುಜ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ಗರಿಷ್ಠ ಪರಿಹಾರ ನೀಡುವಂತೆ ರಕ್ಷಣಾ ಸಚಿವರಿಗೆ ಒತ್ತಾಯ

ಉಡುಪಿ:  ಮಲ್ಪೆಯ ಮೀನುಗಾರರು ಆಳಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿರುವ ಸಂದರ್ಭದಲ್ಲಿ ಸುವರ್ಣ ತ್ರಿಭುಜ ಎಂಬ ಬೋಟ್ ನಾಪತ್ತೆಯಾಗಿದ್ದು ಅದರಲ್ಲಿ ಇದ್ದ ಮೀನುಗಾರರಿಗೆ ಗರಿಷ್ಠ ಪರಿಹಾರವನ್ನು ನೀಡಬೇಕೆಂದು  ಶಾಸಕರಾದ ಕೆ ರಘುಪತಿ ಭಟ್ ಇವರು ಸಂಸದೆ ಶೋಭಾ ಕರಂದ್ಲಾಜೆಯವರ ನೇತೃತ್ವದಲ್ಲಿ ಕೇಂದ್ರ ರಕ್ಷಣಾ ಸಚಿವ ಸನ್ಮಾನ್ಯ ರಾಜನಾಥ್ ಸಿಂಗ್ ಇವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ  ಅಖಿಲ ಭಾರತ  ಮೀನುಗಾರರ ವೇದಿಕೆಯ ಅಧ್ಯಕ್ಷರಾದ ಶ್ರೀ ವೆಲ್ಜಿ ಭಾಯಿ,ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ, ಮಲ್ಪೆ ಮೀನುಗಾರರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀ ಸತೀಶ್ ಕುಂದರ್,ಆನಂದ್ ಸಿ. ಕುಂದರ್, ಸಾಧು ಸಾಲ್ಯಾನ್, ಶ್ರೀ ದಯಾನಂದ ಸುವರ್ಣ,ಕರುಣಾಕರ ಸಾಲ್ಯಾನ್, ಗೋಪಾಲ್, ನಿತಿನ್ ಕುಮಾರ್, ರವಿರಾಜ್ ಸುವರ್ಣ, ಹರೀಶ್ ಕುಂದರ್, ರಾಜೇಶ್ ಪುತ್ರನ್, ಜಯಪ್ರಕಾಶ್, ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!