ಭಟ್ಕಳ ಯುವಕನಿಗೆ ಕೊರೋನಾ ಸೋಂಕು: ಉಡುಪಿಯ 21 ಸಹ ಪ್ರಯಾಣಿಕರ ತಪಾಸಣೆಗೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ: (ಉಡುಪಿ ಟೈಮ್ಸ್ ವರದಿ) ದುಬೈನಿಂದ ವಿಮಾನದಲ್ಲಿ ಬಂದ ಭಟ್ಕಳ ಯುವಕನಿಗೆ ಕೊರೋನಾ ಸೋಂಕು ದೃಡ ಪಡುತ್ತಿದ್ದಂತೆ 21 ಸಹ ಪ್ರಯಾಣಿಕರನ್ನು ತಪಾಸಣೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ.

ದುಬೈನಿಂದ ಮಾರ್ಚ್ 19 ರಂದು ಮಂಗಳೂರಿಗೆ ಬಂದಿಳಿದ ವಿಮಾನದಲ್ಲಿ ಭಟ್ಕಳದ 21 ವರ್ಷದ ಯುವಕನಿಗೆ ಕೊರೋನಾ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಆ ವಿಮಾನದಲ್ಲಿ ಉಡುಪಿ ಜಿಲ್ಲೆಯ 21 ಸಹಾ ಪ್ರಯಾಣಿಕರಾಗಿದ್ದವರನ್ನು ಪತ್ತೆ ಹಚ್ಚಿ ಅವರನ್ನು ತಪಾಸಣೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.


ಅವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಿ ವೈದ್ಯಕೀಯಾ ತಪಾಸಣೆಗೆ ಒಳಪಡಿಸಬೇಕು ಹಾಗೂ ಮೇಲೆ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!