ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ

ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ 
ಉಡುಪಿ : ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಅಧ್ಯಕ್ಷರಾಗಿ ಖ್ಯಾತ ಸಮಾಜ ಸೇವಕರು, ದಾನಿ ಉದ್ಯಮಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆದ ಗುತ್ತಿಗೆದಾರರ ವಾರ್ಷಿಕ ಮಹಾಸಭೆಯಲ್ಲಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಹಾಗೂ ಬಂಟರ ಯಾನೆ ನಾಡವರ ಸಂಘ ಹೆಬ್ರಿ –  ಅಜೆಕಾರು ವಲಯದ ಅಧ್ಯಕ್ಷರಾಗಿರುವ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಅಣ್ಣಯ್ಯ ನಾಯಕ್ ಪಟ್ಲ, ಕಾರ್ಯದರ್ಶಿಯಾಗಿ ರತ್ನಾಕರ ಶೆಟ್ಟಿ ಸಂತೆಕಟ್ಟೆ, ಕೋಶಾಧಿಕಾರಿಯಾಗಿ ಪ್ರಶಾಂತ್ ಮೊಳಹಳ್ಳಿ ಆಯ್ಕೆಯಾಗಿದ್ದಾರೆ.
ಗುತ್ತಿಗೆದಾರರಾದ ಕಿಶೋರ್ ಕುಮಾರ್ ಗುರ್ಮೆ, ಚಂದ್ರಶೇಖರ್ ಶೆಟ್ಟಿ ಕುಂದಾಪುರ, ಸುಧೀರ್ ಕುಮಾರ್ ಶೆಟ್ಟಿ ಕುಂದಾಪುರ, ಅಂತಯ್ಯ ಶೆಟ್ಟಿ , ಅರುಣ್ ಕುಮಾರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು. ಗುತ್ತಿಗೆದಾರರ ಸಂಘದ ಹಿಂದಿನ ಅಧ್ಯಕ್ಷರಾಗಿದ್ದ ಶಿವರಾಮ ಶೆಟ್ಟಿ ಅವರಿಗೆ ಸಂತಾಪ ಸೂಚಿಸಲಾಯಿತು.

Leave a Reply

Your email address will not be published. Required fields are marked *

error: Content is protected !!