ಡ್ರಾಯಿಂಗ್ ಸ್ಪರ್ಧೆಯಲ್ಲಿ ಪ್ರಥಮ : ಸಚಿವರಿಂದ ಸನ್ಮಾನ

ಬಂಟ್ವಾಳ:  ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೧೮-೧೯ರ ಸಾಲಿನ ಅಂತರಾಷ್ಟ್ರೀಯ ಮಟ್ಟದ ಚಿಂತನ ಡ್ರಾಯಿಂಗ್ ಸ್ಪರ್ಧೆ ಗೋಳ್ತಮಜಲುವಿನಲ್ಲಿ ನಡೆಯಿತು.  ಇದರಲ್ಲಿ ಮುಫ್ರೀನಾ ಬಾನು ಜಿಲ್ಲೆಗೆ ಪ್ರಥಮ ರ್‍ಯಾಂಕ್ ಪಡೆಯುವ ಮೂಲಕ ಚಿನ್ನದ ಪದಕ ಮತ್ತು ಬೆಳ್ಳಿಯ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.  ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಮುಫ್ರಿನ್ ಬಾನುವಿಗೆ ಪದಕ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಜಯಲತಾ ಬಿ. , ಹೆತ್ತವರಾದ ಮುಸ್ತಾಕ್ ಬೇಗ್ ನೆಲ್ಲಿಗುಡ್ಡೆ, ಶಾಹಿದಾ ಬಾನು , ಸಚಿವರ ಆಪ್ತ ಸಹಾಯಕ ಚಂದ್ರಶೇಖರ ಪಾತೂರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!