ಕರ್ತವ್ಯ ಲೋಪ 16 ಪೊಲೀಸ್ ಅಮಾನತು

ಧಾರವಾಡ: ಕರ್ತವ್ಯ ಲೋಪ ಎಸಗಿದ ಆರೋಪದಡಿ 16 ಪೊಲೀಸ್ ಸಿಬ್ಬಂದಿಯನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್. ದೀಲಿಪ್ ಅಮಾನತುಗೊಳಿಸಿ ಆದೇಶ ಮಾಡಿದ್ದಾರೆ.

ಸೆ. 12 ರಂದು ಗಣೇಶ ಮೆರವಣಿಗೆ ವೇಳೆ 9 ಜನರಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದ.ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಆಯುಕ್ತರು ಆದಿನ ಕರ್ತವ್ಯದಲ್ಲಿದ್ದ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ.

ಇನ್ನು ರೌಡಿ ಶೀಟರ್ ಜತೆಗೆ ನಿಕಟ ಸಂಪರ್ಕವಿದ್ದ ಕೆಲ ಪೋಲೀಸ್ ಸಿಬ್ಬಂದಿಗೆ ಶೋಕಾಸ್ ನೋಟೀಸ್ ನೀಡಲಾಗಿದೆ.ಮಾತ್ರವಲ್ಲದೆ ಇಲಾಖೆಯ ಕೆಲವು ಸಿಬ್ಬಂದಿಗಳು ನೇರವಾಗಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದ್ದು ಈ ಕುರಿತು ತನಿಖೆ ನಡೆಯುತ್ತಿದೆ. ಒಂದೊಮ್ಮೆ ಆರೋಪ ಸಾಬೀತಾದರೆ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಆಯುಕ್ತರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!