ಮಾರ್ಚ್ 23 ರಿಂದ ಕೆ ಎಂ ಸಿ ಯಲ್ಲಿ ಎಮರ್ಜೆನ್ಸಿ ಸೌಲಭ್ಯ ಮಾತ್ರ ಲಭ್ಯ

ಮಣಿಪಾಲ – ಕರೋನಾ ವೈರಸ್ (ಕೋವಿಡ್ – 19) ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮವಾಗಿ, 23 ಮಾರ್ಚ್ ಸೋಮವಾರದಿಂದ ವೈದ್ಯಕೀಯ ತುರ್ತು ಚಿಕಿತ್ಸೆ ಮತ್ತು ಎಮರ್ಜೆನ್ಸಿ ಚಿಕಿತ್ಸೆ ಮಾತ್ರ ನೀಡಲಿದೆ ಎಂದು ಕೆ ಎಂ ಸಿ ವೈದ್ಯಕೀಯ ಅಧೀಕ್ಷಕರು ತಿಳಿಸಿದರು.

ಆಸ್ಪತ್ರೆಗೆ ಬರುವ ಪ್ರತಿಯೊಬ್ಬರನ್ನು ಹೊರಭಾಗದಲ್ಲಿ ಹಾಕಿರುವ ತಾತ್ಕಾಲಿಕ ತಪಾಸಣಾ ಕೇಂದ್ರದಲ್ಲಿ ಪರೀಕ್ಷಿಸಿ ನಂತರ ಮುಂದಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ಆಸ್ಪತ್ರೆಯ ಸಂಬಂದಿಸಿದ ವಿಭಾಗದ ವ್ಯೆದ್ಯರಿಂದ ಚಿಕಿತ್ಸೆಗೆ ಅವಕಾಶ ನೀಡಲಾಗುವುದು . ಅತ್ಯವಶ್ಯ ಚಿಕಿತ್ಸೆಯ ಅಗತ್ಯ ಇರದೆ ಇರುವ ರೋಗಿಗಳನ್ನು, ಮುಂದಿನ ದಿನಾಂಕ ದಲ್ಲಿ ಆಸ್ಪತ್ರೆಗೆ ಬರುವಂತೆ ತಿಳಿಸಲಾಗುವುದು ಎಂಬುದಾಗಿ ಅವರು ತಿಳಿಸಿದರು.

ತೀವ್ರ ನಿಘಾ ಘಟಕಗಳಿಗೆ (ಐಸಿಯು) ಪ್ರವೇಶ ಮತ್ತು ಶಸ್ತ್ರಚಿಕಿತ್ಸೆಯ ನಂತರದ ತೀವ್ರ ನಿಗಾ ಘಟಕಗಳ ಪ್ರವೇಶದ ನಿರ್ಬಂಧವನ್ನು ಮುಂದುವರಿಸಲಿದೆ. ಆದಾಗ್ಯೂ ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂಬುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!