ಕೊರೋನ ಸೋಂಕು ಭೀತಿ: ಉಡುಪಿ ಧರ್ಮಪ್ರಾಂತ್ಯದಲ್ಲಿ ಮಾ. 31ರವರೆಗೆ ಚರ್ಚ್ ಗಳಲ್ಲಿ ಬಲಿಪೂಜೆಗಳು ರದ್ದು

ಉಡುಪಿ: (ಉಡುಪಿ ಟೈಮ್ಸ್ ವರದಿ) ಕೊರೋನ ಸೋಂಕು ಭೀತಿಯ ಹಿನ್ನೆಲೆಯಲ್ಲಿ ಉಡುಪಿ ಧರ್ಮಪ್ರಾಂತದ ಎಲ್ಲ ಚರ್ಚ್ ಗಳಲ್ಲಿ ನಿಗದಿತ ಸಮಯದಲ್ಲಿ ನಡೆಯುವ ಎಲ್ಲ ಬಲಿಪೂಜೆಗಳನ್ನು ಮಾ.31ರವರೆಗೆ ರದ್ದುಗೊಳಿಸಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಆದೇಶ ನೀಡಿದ್ದಾರೆ.

ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನ ಸೋಂಕು ಉಡುಪಿಯಲ್ಲಿ ಭೀತಿ ಹುಟ್ಟಿಸಿದೆ. ಮುಂಜಾಗ್ರತಾ ಕ್ರಮವಾಗಿ ಧಾರ್ಮಿಕ ಕಾರ್ಯ ಕ್ರಮಗಳನ್ನು ರದ್ದುಪಡಿಸಲು ಜಿಲ್ಲಾಡಳಿತವು ಆದೇಶ ನೀಡಿದ್ದು, ಅದರಂತೆ ಚರ್ಚ್ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿನ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗಿದೆ. ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಬಿಷಪ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!