ಮೀನುಗಾರರ ಸಾಲ ಮನ್ನಾ: ಮುಖ್ಯಮಂತ್ರಿಗೆ ಮೀನುಗಾರರ ಮಹಿಳೆಯರಿಂದ ಸನ್ಮಾನ

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮೀನುಗಾರರ ಸಾಲ ಮನ್ನಾ ಮಾಡಿದ್ದಕ್ಕಾಗಿ ಕರಾವಳಿ ಮೀನುಗಾರರ ಮಹಿಳೆಯರಿಂದ ಸನ್ಮಾನ ಮಾಡಲಾಯಿತು.

ಮಂಗಳೂರು ಜಿಲ್ಲೆಯಲ್ಲಿ ನೆರೆ ಹಾನಿ ಪರಿಸ್ಥಿತಿ ಅವಲೋಕಿಸಲು ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಅವರನ್ನು ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾಂಜಲಿ ಸುವರ್ಣ ನೇತೃತ್ವದಲ್ಲಿ ಕರಾವಳಿ ಮೀನುಗಾರ ಮಹಿಳೆಯರ ಪರವಾಗಿ ಬೋಟ್ ಆಕಾರದ ಸ್ಮರಣಿಕೆಯನ್ನು ನೀಡಿ  ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಭರತ್ ಶೆಟ್ಟಿ, ರಾಜೇಶ್ ನಾಯಕ್, ಸಂಜೀವ ಮಟಂದೂರು, ವೇದವ್ಯಾಸ ಕಾಮತ್, ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ್ ಮತ್ತು ಮೀನುಗಾರ ಮಹಿಳೆಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!