ಅನಗತ್ಯ ಕಛೇರಿಗೆ ಬರುವುದು ಸರಕಾರಿ ಆದೇಶ ಉಲ್ಲಂಘನೆ, ಯಾರು ಭೇಟಿ ನೀಡಬೇಡಿ: ಡಿಸಿ

ಉಡುಪಿ: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸೆಕ್ಷನ್ 144 (3) ನಿರ್ಬಂಧಿಸಿ ಆದೇಶವನ್ನು ಉಲ್ಲಂಘಿಸಿ ಸಣ್ಣಪುಟ್ಟ ಕಾರಣಕ್ಕೆ ಪ್ರತಿದಿನ ಜಿಲ್ಲಾಧಿಕಾರಿಯವರ ಕಛೇರಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು ಇದು ಸರ್ಕಾರದ ಆದೇಶದ ಉಲ್ಲಂಘನೆಯಾಗಿರುತ್ತದೆ.


ಸಾರ್ವಜನಿಕರು ಉಡುಪಿ ಜಿಲ್ಲಾಧಿಕಾರಿಯವರ ಕಛೇರಿಯ ಮುಂಭಾಗದಲ್ಲಿ ಅನಾವಶ್ಯಕವಾಗಿ ಅನುಮತಿಯನ್ನು ಪಡೆಯಲು ಏ 14 ರವರೆಗೆ ಬರುವುದನ್ನು ನಿಷೇಧಿಸಲಾಗಿದೆ. ತುರ್ತು ವೈದ್ಯಕೀಯ ಚಿಕಿತ್ಸೆ ನೆಲೆಯಲ್ಲಿ ಬೇರೆ ಜಿಲ್ಲೆಯ ಆಸ್ಪತ್ರೆಗಳಿಗೆ ತೆರಳಲು ವೈದ್ಯಕೀಯ ದೃಢಪತ್ರದೊಂದಿಗೆ ಸಾರ್ವಜನಿಕರಿಗೆ ಅನುಮತಿಯನ್ನು ಪಡೆಯಲು ಮಾತ್ರ ಅವಕಾಶ ನೀಡಲಾಗಿದೆ ಹೊರತು ಬೇರೆ ಯಾವುದೇ ಅನುಮತಿಗಾಗಿ ಈ ಕಚೇರಿಗೆ ಆಗಮಿಸಬಾರದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!