ಚಿನ್ನ ಬೆಳ್ಳಿ ಕೆಲಸಗಾರರ ಸಂಘ: ಅಧ್ಯಕ್ಷರಾಗಿ ಕಿಶೋರ್ ಮರು ಆಯ್ಕೆ

ಉಡುಪಿ: ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘ ಉಡುಪಿ ಇದರ ವಾರ್ಷಿಕ ಮಹಾಸಭೆ ಗಾಯತ್ರಿ ಕಲ್ಯಾಣ ಮಂಟಪ ಕುಂಜಿಬೆಟ್ಟು ಉಡುಪಿ ಇಲ್ಲಿ ಜರಗಿತು.ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕಿಶೋರ್ ಆರ್. ಆಚಾರ್ಯ ವಹಿಸಿದರು.

ಮುಖ್ಯ ಅತಿಥಿಯಾಗಿ ಕಾರ್ಮಿಕ ಇಲಾಖೆಯ ಜೀವನ್ ಕುಮಾರ್, ಪ್ರವೀಣ್ ಕುಮಾರ್, ವೀರನಾರಾಯಣ ರಾವ್, ದ.ಕ.ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಕೆ.ಎಲ್.ಹರೀಶ್, ಕಾನೂನು ಸಲಹೆಗಾರ ಗಂಗಾಧರ ಹೆಚ್ ಎಮ್,ಗೌರವಾಧ್ಯಕ್ಷರಾದ ಸುಂದರ ಆಚಾರ್ಯ, ಕುಂದಾಪುರ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಬಸ್ರೂರು,ಉಪಾಧ್ಯಕ್ಷ ಪ್ರಭಾಕರ ಆಚಾರ್ಯ, ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ವಿ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಿರಿಯ ಕುಶಲಕರ್ಮಿ ಪ್ರಕಾಶ ಆಚಾರ್ಯ ಗರ್ಡೆ,ರಮಾನಾಥ ಶೇಟ್ ಸನ್ಮಾನಿಸಲಾಯಿತು. ಡಾಕ್ಟರೇಟ್ ಪದವಿ ಪುರಸ್ಕೃತ ಡಾ.ಶಿಲ್ಪಿ ರಾಘವೇಂದ್ರ ಆಚಾರ್ಯ,ಎಸ್ ಎಸ್ ಎಲ್ ಸಿ ಯಲ್ಲಿ 625 ರಲ್ಲಿ 621ಅಂಕ ಗಳಿಸಿ ರಾಜ್ಯಕ್ಕೆ 5 ನೆಯ ಸ್ಥಾನ ಗಳಿಸಿದ ಅಂಕಿತ ಪಿ ಆಚಾರ್ಯ ಇವರನ್ನು ಅಭಿನಂದಿಸಲಾಯಿತು,ಚಿತ್ರಕಲೆ ಹಾಗೂ ವಿವಿಧ ಆಟೋಟ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Leave a Reply

Your email address will not be published. Required fields are marked *

error: Content is protected !!