ಹಾಸನ : ಲಾಠಿ ಚಾರ್ಜ್ ಹಲವರಿಗೆ ಗಾಯ

ಹಾಸನ: ನಗರದ ಕೈಗಾರಿಕಾ ವಲಯದಲ್ಲಿರುವ ಹಿಮ್ಮತ್ ಸಿಂಗ್ ಗಾರ್ಮೆಂಟ್ಸ್‌ ಬಳಿ ಬುಧವಾರ ಕಾರ್ಮಿಕರ ದಿಢೀರ್ ಪ್ರತಿಭಟನೆ ನಡೆಸಿದರು.
ವಿನಾಕಾರಣ ಕಾರ್ಮಿಕರ ಮೇಲೆ ಹಲ್ಲೆ ಮತ್ತು ದೌರ್ಜನ್ಯ ನಡೆಸುತ್ತಿರುವುದನ್ನು ಖಂಡಿಸಿ ಸಾವಿರಾರು ಕಾರ್ಮಿಕರು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದರು.

ಗಾರ್ಮೆಂಟ್ಸ್‌ನಲ್ಲಿ ನಾಲ್ಕು ಸಾವಿರಕ್ಕಿಂತ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ ಆಡಳಿತ ಮಂಡಳಿಯವರು ಕಾರ್ಮಿಕ ಕಾಯ್ದೆ ಉಲ್ಲಂಘಿಸಿ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಜತೆಗೆ, ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕೆಲಸಕ್ಕೆ ಬಂದಿರುವ‌ ಕಾರ್ಮಿಕರ ಮೇಲೆ ಇತ್ತೀಚೆಗೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರೊಚ್ಚಿಗೆದ್ದ ಪ್ರತಿಭಟನಾಕಾರರು ಸ್ಥಳದಲ್ಲಿದ್ದ ಪೊಲೀಸ್‌ ವಾಹನಗಳು ಸೇರಿದಂತೆ ಹಲವು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಘಟನೆಯಲ್ಲಿ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

error: Content is protected !!