ಭಾರೀ ಮಳೆ ಪರಿಣಾಮ ಲಘು ಭೂಕುಸಿತ, ಕುಸಿದು ಬಿದ್ದ ತಡೆಗೋಡೆ

ಮಂಗಳೂರು: ಭಾರಿ ಮಳೆಯ ಪರಿಣಾಮ ನಗರದ ಆಕಾಶಭವನ ಸಮೀಪ ಲಘು ಭೂಕುಸಿತ ಸಂಭವಿಸಿದ್ದು, ತಡೆಗೋಡೆ ಕುಸಿದು ಬಿದ್ದಿದೆ. ಭಾರೀ ಮಳೆ ಸುರಿಯುತ್ತಿರುದರಿಂದ ಭೂ ಕುಸಿತ ಉಂಟಾಗಿದ್ದು, ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಭೂ ಕುಸಿತ ಉಂಟಾಗಿರುವ ಪ್ರದೇಶದಲ್ಲಿ ಮಂಗಳೂರು ಮಹಾ ನಗರ ಪಾಲಿಕೆಯಿಂದ ತುರ್ತಾಗಿ ಮಣ್ಣು ತೆಗೆಯುವ ಕಾರ್ಯ ನಡೆಯುತ್ತಿದೆ.

ಕರಾವಳಿಯಲ್ಲಿ ದುರ್ಬಲವಾಗಿದ್ದ ಮುಂಗಾರು ಚುರುಕುಗೊಂಡಿದೆ. ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಉತ್ತಮ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲೂ ಮುಂಗಾರು ಮಳೆ ಅಬ್ಬರ ಪಡೆದಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ.

Leave a Reply

Your email address will not be published. Required fields are marked *

error: Content is protected !!