ಬೆಂಬಿಡದ ಚಂಡಮಾರುತ! ಮತ್ತೆ ಕರಾವಳಿ ಕರ್ನಾಟಕಕ್ಕೆ ಹೈ ಅಲರ್ಟ್

ಉಡುಪಿ: ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು , ರಾಜ್ಯದಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನವೆಂಬರ್ ೬ರಂದು ಗುಜರಾತ್, ಕೇರಳ, ತಮಿಳುನಾಡು ಸೇರಿದಂತೆ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆದ್ದರಿಂದ ದೇಶದ ಕರಾವಳಿ ಭಾಗವಾದ ಕೇರಳ, ಗುಜರಾತ್ ಸೇರಿದಂತೆ ಕರ್ನಾಟಕದ ಕೆಲ ಭಾಗಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳದ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೇರಳದ ಎರ್ನಾಕುಲಮ್, ತ್ರಿಶೂರ್, ಮಲಪ್ಪುರಂ ಹಾಗೂ ಕೋಝಿಕ್ಕೊಡ್‌ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 6 ಸೆಂ.ಮೀನಿಂದ 20 ಸೆಂ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಗುಜರಾತ್‌ನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ. ಮಹಾ ಚಂಡಮಾರುತ ಪೂರ್ವ-ಈಶಾನ್ಯ ದಿಕ್ಕಿನಲ್ಲಿ ದಕ್ಷಿಣ ಗುಜರಾತ್ ಕರಾವಳಿಯ ಕಡೆಗೆ ಮರು ತಿರುವು ಪಡೆಯಲಿದೆ. ಈ ಹಿನ್ನಲೆ, ನವೆಂಬರ್ 6 ರಿಂದ ಗುಜರಾತಿನಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!