ಐಎಂಎ ಹಗರಣ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

ಬೆಂಗಳೂರು: “ಬಹುಕೋಟಿ ವಂಚನೆ ಆರೋಪಕ್ಕೆ ಒಳಗಾಗಿರುವ ಐಎಂಎ ಕಂಪನಿ ಹಗರಣದ ತನಿಖೆಯನ್ನು ಸಿಬಿಐ ವಶಕ್ಕೆ ಒಪ್ಪಿಸಬೇಕು” ಎಂದು ಕೋರಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ನಗರದ ನಿವೃತ್ತ ತೆರಿಗೆ ಅಧಿಕಾರಿ ಇಕ್ಬಾಲ್ ಅಹ್ಮದ್ ಸೇರಿದಂತೆ ೧೭ ಜನ ಹೂಡಿಕೆದಾರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರವೂ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ. ಪ್ರಕರಣವನ್ನು ರಾಜ್ಯ ಪೊಲೀಸರು ನಡೆಸಿದರೆ ವಂಚನೆಗೆ ಒಳಗಾಗಿರುವ ಹೂಡಿಕೆದಾರರಿಗೆ ನ್ಯಾಯ ಸಿಗುವುದಿಲ್ಲ. ಇದರಲ್ಲಿ ಹಲವು ಸಚಿವರು ಮತ್ತು ಶಾಸಕರೂ ಭಾಗಿಯಾಗಿದ್ದಾರೆ. ಆದ್ದರಿಂದ ಕೂಡಲೇ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು” ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!