ಅಕ್ರಮ ಮರಳು ದಾಸ್ತಾನು ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಡಳಿತ

ಉಡುಪಿ- ಉಡುಪಿ ಜಿಲ್ಲೆಯಲ್ಲಿ ಅನಧಿಕ್ರತವಾಗಿ ಮರಳು ದಾಸ್ತಾನು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ(CRZ) ಹಾಗೂ ಕರಾವಳಿ ನಿಯಂತ್ರಣ ವಲಯ ಹೊರತು ಪಡಿಸಿದ (ನಾನ್ ಸಿಆರ್‍ಝಡ್) ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಪರವಾನಿಗೆ ನೀಡಲಾಗಿದ್ದು, ಅದರಂತೆ ಮರಳು ದಿಬ್ಬ ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದೆ .
ಉಡುಪಿ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಮಾಲೀಕರು, ಗುತ್ತಿಗೆದಾರರು ಹಾಗೂ ಮಂಜೂರಾದ ಕಟ್ಟಡದ ಕಾಮಗಾರಿಗಳ ಅವಶ್ಯಕತೆಗನುಗುಣವಾಗಿ ಮರಳನ್ನು ಸಾಗಾಟ ಪರವಾನಿಗೆಯೊಂದಿಗೆ ಉಪಯೋಗಿಸಬೇಕು , ಇದನ್ನು ಹೊರತುಪಡಿಸಿ ಮರಳಿನ ದಾಸ್ತಾನು ಹಾಗೂ ಅನಧಿಕೃತ ಮರಳಿನ ದಾಸ್ತಾನು ಕಂಡುಬಂದಲ್ಲಿ ದಾಸ್ತಾನುಗಳ ಹಾಗೂ ಸಂಬಂಧಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಜಿಲ್ಲಾಡಳಿತವು ನಿಯಾಮಾನುಸಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಮಿತಿಯ ಹಿರಿಯ ಭೂ ವಿಜ್ಞಾನಿ ಹಾಗೂ ಸದಸ್ಯ ಕಾರ್ಯದರ್ಶಿ ಅವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!