ಮಾಜಿ ಸಚಿವರಿಗೆ ವ್ಯಂಗ್ಯ : ಠಾಣೆಗೆ ದೂರು

ಬಂಟ್ವಾಳ: ತೀವ್ರ ಮಳೆಯಿಂದಾಗಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ದೋಣಿಯಲ್ಲಿ ತೆರಳುತ್ತಿದ್ದ ಮಾಜಿ ಸಚಿವ ರಮಾನಾಥ ರೈ ಯವರ ವೀಡಿಯೋ ಚಿತ್ರೀಕರಣವನ್ನು ತಿರುಚಿ ,ಗಣಪತಿ ದೇವರ ವಿಸರ್ಜನೆಯ ರೂಪದಲ್ಲಿ ವ್ಯಂಗ್ಯವನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಹಾಗೂ ಹಿಂದೂಗಳ ಆರಾಧ್ಯ ದೇವರ ಅಪಹಾಸ್ಯ ಮಾಡಿ  ಭಾವನೆಗಳಿಗೆ ಧಕ್ಕೆ ತರಿಸಿದ ಕಿಡಿಗೇಡಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಈ ಸಂಧರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್‍, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್‍ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ,ಪುರಸಭಾ ಸದಸ್ಯರಾದ ಗಂಗಾಧರ ಪೂಜಾರಿ, ಲೋಲಾಕ್ಷ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!